ಅಸ್ಸಾಂನಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ಆರಂಭಿಸಿರುವ ಪ್ರಿಯಾಂಕಾ ಗಾಂಧಿ, ಟೀ ಎಸ್ಟೇಟ್ಗಳಿಗೂ ಭೇಟಿ ನೀಡಿ ಅಲ್ಲಿನ ಕಾರ್ಮಿಕರೊಂದಿಗೆ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ತೇಜಪುರ್ದಲ್ಲಿ ಮಾತನಾಡಿ, ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಗೃಹಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತೇವೆ. ಅಲ್ಲದೆ ಟೀ ಗಾರ್ಡನ್ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ದಿನ 365 ರೂ. ನೀಡುತ್ತೇವೆ. ಅಲ್ಲದೆ 5 ಲಕ್ಷ ಹೊಸ ಸರ್ಕಾರಿ ಕೆಲಸಗಳನ್ನು ಸೃಷ್ಟಿಸುತ್ತೇವೆ ಎಂದು ಹೇಳಿದ್ದಾರೆ.
ಈ ಎಲ್ಲ ಹೇಳಿಕೆಗಳು ಕೇವಲ ಆಶ್ವಾಸನೆಗಳಲ್ಲ, ಭರವಸೆಗಳು. ಅಲ್ಲದೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿ ಸಿಎಎಯನ್ನು ಜಾರಿ ಮಾಡುವುದಿಲ್ಲ ಎಂದು ಹೇಳುವ ಮೂಲಕ ಜನರನ್ನು ಮನವೊಲಿಸಲು ಮುಂದಾಗಿದ್ದಾರೆ.